News / Blog Details

  • Home
  • >
  • News / Blog Details

ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಅಮಿತಾ ಶಾ ಸೂಚನೆ

  • 71
img ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಅಮಿತಾ ಶಾ ಸೂಚನೆ
Font size:
Print

ನವದೆಹಲಿ: ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಮೇ 07 ರಂದು ಮಧ್ಯರಾತ್ರಿ 2ಗಂಟೆಗೆ ಆಪರೇಷನ್ ಸಿಂದೂರ ಹೆಸರಿನಲ್ಲಿ ಮಿಸೈಲ್ ದಾಳಿ ನಡೆಸಿದ್ದು, 80ಕ್ಕೂ ಅಧಿಕ ಉಗ್ರರು ಹತ್ಯೆಗೀಡಾಗಿದ್ದರು. ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿಭಾಗದಲ್ಲಿರುವ ರಾಜ್ಯಗಳು ಅಲರ್ಟ್ ಆಗಿರುವಂತೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ. ಗಡಿ ಭಾಗದಲ್ಲಿರುವ ರಾಜ್ಯಗಳ ಅಧಿಕಾರಿಗಳು, ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುವ ಪೋಸ್ಟ್ ಗಳ ಮೇಲೆ ತೀವ್ರ ನಿಗಾ ಇರಿಸುವಂತೆ ನಿರ್ದೇಶನ ನೀಡಿದ್ದು, ಸುಳ್ಳು ಮಾಹಿತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಕೇಂದ್ರ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮ್ಮು-ಕಾಶ್ಮೀರ-ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ಗಳು, ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ರಾಜಸ್ಥಾನ್, ಗುಜರಾತ್, ಪಶ್ಚಿಮಬಂಗಾಳದ ಮುಖ್ಯಮಂತ್ರಿಗಳು ಹಾಗೂ ಸಿಕ್ಕಿಂ ಸರ್ಕಾರದ ಪ್ರತಿನಿಧಿಗಳು ಭಾಗವಹಿಸಿದ್ದರು. ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ಆಪರೇಷನ್ ಸಿಂದೂರ ಯಶಸ್ವಿ ದಾಳಿ ಕಾರ್ಯಾಚರಣೆಗಾಗಿ ನರೇಂದ್ರ ಮೋದಿ ಸರ್ಕಾರ ಹಾಗೂ ಸೇನೆಗೆ ಲೆಫ್ಟಿನೆಂಟ್ ಗವರ್ನರ್ ಗಳು, ಮುಖ್ಯಮಂತ್ರಿಗಳು ಶ್ಲಾಘನೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ. ಗಡಿ ರಾಜ್ಯದಲ್ಲಿ ವಿಪತ್ತು ನಿರ್ವಹಣಾ ತಂಡ, ನಾಗರಿಕ ರಕ್ಷಣಾ ಸಿಬಂದಿಗಳು, ಹೋಮ್ ಗಾರ್ಡ್ಸ್, ಎನ್ ಸಿಸಿ ತೀವ್ರ ಅಲರ್ಟ್ ಆಗಿರುವಂತೆ ಗೃಹ ಸಚಿವ ಅಮಿತ್ ಶಾ ಅವರು ಸಭೆಯಲ್ಲಿ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ. ಭಾರತದ ಆಪರೇಷನ್ ಸಿಂದೂರದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಶಾ ಸೂಚಿಸಿದ್ದಾರೆ. 
 

No Reviews