ರಾಜ್ಯದ 2 ಜಿಲ್ಲಾಧಿಕಾರಿ ಕಚೇರಿಗೆ ಇಂದು ಬಾಂಬ್ ಬೆದರಿಕೆ ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿದೆ. ಇಂದು ಮಧ್ಯಾಹ್ನ 3 ಗಂಟೆ ಒಳಗೆ ಬ್ಲಾಸ್ಟ್ ಆಗಲಿದೆ ಎನ್ನುವ ಇ-ಮೇಲ್ ಕಳುಹಿಸಲಾಗಿತ್ತು, ಜಿಲ್ಲಾಧಿಕಾರಿ ಕಚೇರಿಯನ್ನು ಬ್ಲಾಸ್ಟ್ ಮಾಡುವ ಬೆದರಿಕೆ ಹಾಕುತ್ತಿದ್ದಂತೆ ಜಿಲ್ಲಾಡಳಿತ ಸಂಪೂರ್ಣ ಎಚ್ಚೆತ್ತುಕೊಂಡಿದೆ. ಚಾಮರಾಜನಗರ ಎಸ್ಪಿ ಕವಿತಾಗೆ ಜಿಲ್ಲಾಡಳಿತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ-ಮೇಲ್ ಬಂದ ಅಕೌಂಟ್ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೆ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಬಾಂಬ್ ನಿಷ್ಕ್ರೀಯ ದಳ ಜಿಲ್ಲಾಧಿಕಾರಿ ಕಚೇರಿಯ ಇಂಚಿಂಚು ಮೂಲೆಯನ್ನ ತಪಾಸಣೆ ನಡೆಸಿದೆ. ಕೂಡಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನ ಪೊಲೀಸರು ಆಚೆ ಕಳಿಸಿದ್ದು, ಅಧಿಕಾರಿಗಳಲ್ಲಿ ಆತಂಕ ಮನೆ ಮಾಡಿತ್ತು. ಮಧ್ಯಾಹ್ನ 3 ಗಂಟೆಯವರೆಗೂ ಯಾರು ಜಿಲ್ಲಾಧಿಕಾರಿ ಕಚೇರಿಗೆ ಬಾರದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಹೀಗಾಗಿ ಬ್ಯಾಗ್ ಬುಕ್ ಸಮೇತ ಅಧಿಕಾರಿಗಳು ಭಯ ಭೀತರಾಗಿ ಕಚೇರಿಯಿಂದ ಓಡೋಡಿ ಆಚೆ ಬಂದಿದ್ದಾರೆ. ಎಸ್ಪಿ ಕವಿತಾ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಡಾಗ್ ಸ್ವ್ಕಾಡ್ ಹಾಗೂ ಬಾಂಬ್ ತಪಾಸಣಾ ತಂಡದಿಂದ ತೀವ್ರ ಶೋಧ ನಡೆಸಲಾಗಿದೆ. ಚಾಮರಾಜನಗರದ ಜೊತೆಗೆ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕಕ್ಕಾಬಿಕ್ಕಿ ಆಗಿರುವ ಸಿಬ್ಬಂದಿ ಕಚೇರಿಯಿಂದ ಹೊರಗಡೆ ಬಂದಿದ್ದಾರೆ. ಬಾಂಬ್ ನಿಷ್ಕ್ರಿಯ ತಂಡದಿಂದ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.
ರಾಜ್ಯದ 2 ಡಿಸಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆ..!
2025-05-02 15:30:09- 62