ಬೆಂಗಳೂರು : ಕರ್ನಾಟಕ ಸಿಎಂ ಸಿದ್ದರಾಮಯ್ಯ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು. ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಸಿಎಂ ಅಧಿಕೃತ ನಿವಾಸದಲ್ಲಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದು. ಸುದ್ದಿಗೋಷ್ಟಿಗೂ ಮೊದಲು ಪಟಾಲಮ್ಮ ದೇವಸ್ಥಾನಕ್ಕೆ ಹೋಗಿದ್ದ ಸಿಎಂ ದೇವರಿಗೆ ಪೂಜೆ ಸಲ್ಲಿಸಿ ಹಣೆಗೆ ಕುಂಕುಮವಿಟ್ಟುಕೊಂಡು ಸುದ್ದಿಗೋಷ್ಟಿಗೆ ಹಾಜರಾದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ನಮ್ಮ ದೇಶದ ರಕ್ಷಣಾ ಪಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರಗಾಮಿಗಳ ನೆಲೆ ನಾಶ ಮಾಡಿ ಪರಾರ್ಕಮ ಮೆರೆದಿದ್ದಾರೆ. ನಮ್ಮ ದೇಶದ ಸೈನಿಕರಿಗೆ ನಾನು ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಇನ್ನು ಪಹಲ್ಗಾಮ್ ದಾಳಿ ಬಳಿಕವೂ ಪಾಕಿಸ್ತಾನದ ಉಗ್ರರನ್ನ ಸದೆಬಡೆಯಲಿಲ್ಲ. ತನ್ನ ಹಠಮಾರಿತನವನ್ನ ಮುಂದುವರಿಸಿದೆ. ಹಾಗಾಗಿ ನಮ್ಮ ಸೈನಿಕರು ದಾಳಿ ಮಾಡಿದ್ದಾರೆ. ಈ ದಾಳಿಯನ್ನ ಬೆಂಬಲಿಸುತ್ತೇನೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಪಾಠ. ಉಗ್ರ ನೆಲೆಯನ್ನ ಟಾರ್ಗೆಟ್ ಮಾಡಿ ದಾಳಿ ಆಗಿದೆ. ಅಮಾಯಕರ ಸಾವು-ನೋವು ಸಂಭವಿಸಿಲ್ಲ. ಹಾಗಾಗಿ ನಮ್ಮ ಭಾರತೀಯ ಸೈನಿಕರಿಗೆ ದೊಡ್ಡ ಸಲಾಂ ಎಂದು ಕರ್ನಾಟಕ ಸರ್ಕಾರದ ಪರವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಾವು ಎಚ್ಚರ ವಹಿಸುವ ಕೆಲಸ ಮಾಡುತ್ತೇನೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಸಂಪೂರ್ಣ ಬೆಂಬಲವನ್ನ ಕೊಡುತ್ತೇವೆ. ನಮ್ಮ ರಾಜ್ಯದಲ್ಲಿ ಎಲ್ಲಾ ಎಚ್ಚರಿಕಾ ಕ್ರಮ ತೆಗೆದುಕೊಳ್ಳುತ್ತದೆ. ಉಗ್ರರ ನೆಲೆ ಮೇಲಿನ ದಾಳಿಯಿಂದಾಗಿ ರಾಯಚೂರಿನ ರ್ಯಾಲಿಯನ್ನ ರದ್ದುಗೊಳಿಸಿದ್ದೇವೆ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಜನ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದರು. ನಮ್ಮ ರಾಜ್ಯವನ್ನ ಆಲರ್ಟ್ ಆಗಿ ಇಡಬೇಕು. ರಾಜ್ಯದಲ್ಲೂ ಮಾಕ್ ಡ್ರಿಲ್ ನಡೆಯುತ್ತಿದೆ. ರಾಷ್ಟ್ರೀಯ ಭದ್ರತೆ ಮುಖ್ಯ, ರಾಜಿ ಇಲ್ಲ. ನೂರಕ್ಕೆ ನೂರು ರಾಷ್ಟ್ರದ ಜೊತೆ ಇರುತ್ತೇವೆ ಎಂದು ಹೇಳಿದರು.
ಉಗ್ರರ ನೆಲೆಗಳನ್ನು ನಾಶಗೊಳಿಸಿದ ಸೇನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
2025-05-07 13:29:20- 45