News / Blog Details

  • Home
  • >
  • News / Blog Details

ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

  • 51
img ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ
Font size:
Print

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅಲ್ಲದೇ, ಬಿಬಿಎಂಪಿ ವಾಹನ ಚಾಲಕರು ಡ್ರೈವರ್ಸ್, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್​ಗಳನ್ನು ಕೂಡ ಮುಂದಿನ ದಿನಗಳಲ್ಲಿ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಪೌರ-ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ 12,692 ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಣೆ ಮಾಡಿದರು. ಬಳಿಕ, ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 38 ಸಾವಿರ ಪೌರಕಾರ್ಮಿಕರಿದ್ದಾರೆ ಎಂದು ತಿಳಿಸಿದರು. ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದಾರೆ ಅಂತ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪೌರಕಾರ್ಮಿಕರು ದೂರು ನೀಡಿದ್ದರು. ಮಿನಿಮಮ್ ವೇಜಸ್ ಆ್ಯಕ್ಟ್ ಅಡಿ ಕನಿಷ್ಠ ವೇತನ ಕೊಡಿಸುವ ಕೆಲಸ ಮಾಡಿದೆ. ಮಧ್ಯವರ್ತಿಗಳ ಹಾವಳಿಯಿಂದ ನೀವು ಇವತ್ತು ಮುಕ್ತರಾಗಿದ್ದೀರಿ ಎಂದರು. ನೀವೆಲ್ಲ ಶುಚಿತ್ವ ಕಾಪಾಡುವರು. ಶುಚಿತ್ವದಲ್ಲೇ ದೈವತ್ವ ಕಾಣುತ್ತೇವೆ. ಅಂತಾ ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಶುಚಿತ್ವ ಮಾಡುವ ಕೆಲಸ ಬಹಳ ಶ್ರೇಷ್ಠವಾದದ್ದು. ಬಸವಣ್ಣ ಅವರು ಕಾಯಕವೇ ಕೈಲಾಸ ಅಂದಿದ್ದರು. ಯಾವ ಕೆಲಸವೂ ಕೀಳಲ್ಲ, ಯಾವ ಕೆಲಸವೂ ಮೇಲಲ್ಲ ಎಂದರು. ನಿಮ್ಮನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಉದ್ದೇಶವಾಗಿದೆ. ಪೌರಕಾರ್ಮಿಕರನ್ನು ಮುಖ್ಯವಾಹಿನಿಗೆ ತರಬೇಕು. ನಮ್ಮ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಶಕ್ತಿ ಕೊಡಬೇಕು. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
 

No Reviews