ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 5 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಆಂದ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕದಿಂದ ಒಟ್ಟು 5 ಕುಮ್ಕಿ ಆನೆಗಳನ್ನ ಆಂದ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನ ಹಸ್ತಾಂತರಿಸಲಾಗಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ. ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಕಾಡಾನೆಗಳನ್ನು ಹಿಡಿಯಲು ಎಂದು ಪಳಗಿಸಿದ್ದ ಒಟ್ಟು 5 ಆನೆಗಳನ್ನು ಆಂದ್ರಪ್ರದೇಶಕ್ಕೆ ಹಸ್ತಾಂತರಿಸಲಾಗಿದ್ದು. ಸಕ್ರೆಬೈಲು ಆನೆ ಶಿಬಿರದಿಂದ 2 ಹಾಗೂ ದುಬಾರೆ ಆನೆ ಶಿಬಿರದಿಂದ 3 ಆನೆಗಳನ್ನು ಹಸ್ತಾಂತರಿಸಲಾಗಿದೆ. ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಐದು ಆನೆಗಳನ್ನು ಹಸ್ತಾಂತರ ಮಾಡಲಾಗಿದೆ. ಇನ್ನು ಆಂಧ್ರ ಡಿಸಿಎಂ ಅವರು ಸಹೋದರ ರಾಜ್ಯವಾಗಿ ಕರ್ನಾಟಕ ನಮ್ಮ ಜೊತೆಗಿದೆ. ಇದರಿಂದ ಎರಡು ರಾಜ್ಯದ ಅರಣ್ಯ ಸುರಕ್ಷಿತವಾಗಿರುತ್ತೆ. ಕರ್ನಾಟಕದ ಸರ್ಕಾರ ಹಾಗೂ ಜನತೆಗೆ ನಾವು ಧನ್ಯವಾದ ತಿಳಿಸುತ್ತೇನೆ ಎಂದು ಪವನ್ ಕಲ್ಯಾಣ್ ಹೇಳಿದರು. ಇನ್ನು ಆಂಧ್ರಪ್ರದೇಶದಲ್ಲಿ 20 ವರ್ಷಗಳಿಂದ ತುಂಬಾ ಜನ ಮೃತಪಟ್ಟಿದ್ದಾರೆ. ಈಗ ಎಲ್ಲ ಸಮಸ್ಯೆ ಬಗೆಹರಿಯುತ್ತೆ. ನಾನು ಸಿಎಂ ಸಿದ್ದರಾಮಯ್ಯ, ಈಶ್ವರ್ ಖಂಡ್ರೆಗೆ ಭರವಸೆ ನೀಡುತ್ತೇನೆ. ಆನೆಗಳನ್ನ ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ನಾವು ಭೇಟಿ ನೀಡಿ ಆನೆಗಳ ಯೋಗಕ್ಷೇಮ ನೋಡಿಕೊಳ್ಳುತ್ತೇನೆ. ಆನೆಗಳಿಗೆ ಸಮಸ್ಯೆ ಆದರೆ ಅದಕ್ಕೆ ನಾನೇ ಹೊಣೆ. ಎಂದು ಪವನ್ ಕಲ್ಯಾಣ್ ಹೇಳಿದ್ದರು.
ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದ ಸರ್ಕಾರ
2025-05-21 14:26:43- 58