ಇಸ್ರೇಲ್ ಮೇಲೆ ಹೌತಿ ಉಗ್ರರು ಕ್ಷಿಪಣಿ ದಾಳಿ ನಡೆಸಿ ಅಟ್ಟಹಾಸ ಮೇರದಿದ್ದಾರೆ. ವಿಮಾನ ನಿಲ್ದಾಣವನ್ನೇ ಟಾರ್ಗೆಟ್ ಮಾಡಿ ಸ್ಫೋಟಿಸಲಾಗಿದ್ದು ಇದಕ್ಕೆ ಕೆಂಡವಾಗಿರುವ ಪ್ರಧಾನಿ 7 ಪಟ್ಟು ಹೆಚ್ಚಿನ ಪ್ರತಿದಾಳಿ ನಡೆಸುವುದಾಗಿ ಗುಡುಗಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಮತ್ತೆ ದಾಳಿ ಶುರುವಾಗಿದೆ. ಪ್ರಾಣ ಭಯಕ್ಕೆ ಹೆದರಿದ ನಾಗರಿಕರು ಬಂಕರ್ ಮೊರೆ ಹೋಗುತ್ತಿದ್ದಾರೆ. ಮತ್ತೊಂದು ಹಂತದ ಯುದ್ಧಕ್ಕೆ ಮರಳುಗಾಡು ಸಜ್ಜಾಗಿದೆ. ಇಸ್ರೇಲ್ ಹಾಗೂ ಮತಾಂಧರ ನಡುವೆ ಮತ್ತೊಂದು ಸುತ್ತಿನ ಯುದ್ಧ ಶುರುವಾಗಿದೆ. ಇಸ್ರೇಲ್ನಲ್ಲಿ ಮತ್ತೆ ಹೌತಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು ಇಸ್ರೇಲ್ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ಯೆಮೆನ್ನಿಂದ ಹಾರಿಸಿದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇಸ್ರೇಲ್ ಗುರಿಯಾಗಿಸಿಕೊಂಡಿರುವ ಇರಾನ್ ಬೆಂಬಲಿತ ಹೌತಿ ಉಗ್ರರು, ನಾವು ಪ್ಯಾಲೆಸ್ಟೀನಿಯನ್ನರ ಜೊತೆಗಿದ್ದೇವೆ ಅಂತ ಕ್ಷಿಪಣಿ ಮತ್ತು ಡ್ರೋನ್ ದಾಳಿ ಮಾಡಿದ್ದಾರೆ. ದಾಳಿ ಬೆನ್ನಲ್ಲೇ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪ್ರಾಣಭಯಕ್ಕೆ ಜನರು ಚೆಲ್ಲಾಪಿಲ್ಲಿಯಾಗಿ ಓಡಾಡಿದ್ದಾರೆ. ಈ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅತ್ತ ಕ್ಷಿಪಣಿ ದಾಳಿ ಮಾಡಿದ ನಂತರ ದೊಡ್ಡ ಸಾಧನೆ ಮಾಡಿದಂತೆ ಪ್ರತ್ಯಕ್ಷವಾದ ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ, ಬೆನ್ ಗುರಿಯನ್ ವಿಮಾನ ನಿಲ್ದಾಣ ಇನ್ನು ಮುಂದೆ ಪ್ರಯಾಣಕ್ಕೆ ಸುರಕ್ಷಿತವಲ್ಲ ಎಂದಿದ್ದಾನೆ.ಯೆಮೆನ್ನ ಹೌತಿ ಉಗ್ರರು ಇಸ್ರೇಲ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೆರಳಿ ಕೆಂಡವಾಗಿದ್ದಾರೆ. ಈ ದಾಳಿಗೆ ನಾವು ಸುಮ್ಮನಿರಲ್ಲ. ಇದಕ್ಕೆ ಪ್ರತಿಯಾಗಿ ಸರಣಿ ದಾಳಿ ನಡೆಸುವುದಾಗಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಹೌತಿಗಳಿಂದ ಕ್ಷಿಪಣಿ ದಾಳಿ ಬೆನ್ನಲ್ಲೇ ಏರ್ ಇಂಡಿಯಾ ಸಂಸ್ಥೆಯು ಮುಂದಿನ 2 ದಿನಗಳ ಕಾಲ ಇಸ್ರೇಲ್ ರಾಜಧಾನಿ ಟೆಲ್ ಅವಿವ್ಗೆ ವಿಮಾನಯಾನವನ್ನ ಸ್ಥಗಿತಗೊಳಿಸಿದೆ. ಕ್ಷಿಪಣಿ ದಾಳಿಯ ಕುರಿತು ಲಭ್ಯವಾಗುತ್ತಿದ್ದಂತೆ ದೆಹಲಿಯಿಂದ ಟೆಲ್ ಅವಿವ್ಗೆ ಹೋಗುತ್ತಿದ್ದ ವಿಮಾನವನ್ನು ಅಬುಧಾಬಿಗೆ ತಿರುಗಿಸಲಾಗಿದೆ. ಇಸ್ರೇಲ್ಗೆ ಟಿಕೆಟ್ ತೆಗೆದುಕೊಂಡವರಿಗೆ ವಿನಾಯಿತಿ ಅಥವಾ ವಿಮಾನಯಾನದ ಮರು ವೇಳಾಪಟ್ಟಿ ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಇಸ್ರೇಲ್ನಲ್ಲಿ ವಿಮಾನ ನಿಲ್ದಾಣ ಸುರಕ್ಷಿವಲ್ಲ ಎಂದು ಹೌತಿ ಎಚ್ಚರಿಕೆ
2025-05-05 10:55:58- 43