News / Blog Details

  • Home
  • >
  • News / Blog Details

ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ- ರಾಜಣ್ಣ

  • 61
img ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ- ರಾಜಣ್ಣ
Font size:
Print

ಮೈಸೂರು: ಚುನಾವಣಾ  ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಈಗಾಗಲೇ 75 ವರ್ಷವಾಗಿದೆ, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂದು ಹೇಳಿದರು.
ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು. ತಮ್ಮ ಸಹಕಾರ ಇಲಾಖೆಯ ಬಗ್ಗೆ ಮಾತನಾಡಿದ ಕೆ,ಎನ್​ ರಾಜಣ್ಣ ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ತೆಗೆದುಕೊಂಡಿರುವೇ. ನಮ್ಮ ರಾಜ್ಯಕ್ಕೆ ಸಂಬಂದಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ ಈ ಬಗ್ಗೆ ಚರ್ಚಿಸಿ ಕ್ರಮ ವಹಿಸುತ್ತೇವೆ. ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಾ: ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲಾ ಚುನಾವಣೆಗಳನ್ನು ನಡೆಸಲಾಗುವುದು ಎಂದರು.
 

No Reviews