News / Blog Details

  • Home
  • >
  • News / Blog Details

ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ

  • 8
img ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ
Font size:
Print

ಬೆಂಗಳೂರು: ನೆಲಮಂಗಲದ ಶ್ರೀನಿವಾಸಪುರದ ತೋಟದ ಮನೆಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ರಮ್ಯಾ ಹಾಗೂ ಪುನೀತ್ ಎನ್ನುವ ಯುವಕನ​​ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಿನ್ನೆ ಸಂಜೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಸಾವಿನ ಹಲವು ಅನುಮಾನಗಳಿಗೆ ಎಡೆಮಾಟಿಕೊಟ್ಟಿದೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬೇರೆ ಬೇರೆ ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ. 27 ವರ್ಷದ ರಮ್ಯ ಮೃತದೇಹ ನೆಲಮಂಗಲದ ಶ್ರೀನಿವಾಸಪುರ‌ದ ತೋಟದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ವಕೀಲೆ ರಮ್ಯ ಮನೆಯಲ್ಲಿ ವಾಸವಿದ್ದ ಪುನೀತ್ ಎಂಬಾತನ ಮೃತದೇಹ ಕೆಂಪಲಿಂಗನಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿಗೆ ಕಾರಣ‌ ನಿಗೂಢವಾಗಿದೆ. ಮರಣೋತ್ತರ ಪರೀಕ್ಣೆಗೆ ಮೃತ ದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಮ್ಯಾ ಸಾವಿನ ಸುತ್ತಲೂ ಅನುಮಾನಗಳು ಹುಟ್ಟಿಕೊಂಡಿದ್ದು, ಕುಟುಂಬಸ್ಥರು ಉದ್ಯಮಿ ದಿನೇಶ್ ಎಂಬಾತನ ಮೇಲೆ ಅನುಮಾನ ವ್ತಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಕುಟುಂಬಸ್ಥರ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
 

No Reviews