News / Blog Details

  • Home
  • >
  • News / Blog Details

ರಾಜ್ಯದ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ 

  • 71
img ರಾಜ್ಯದ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ 
Font size:
Print

ಬೆಂಗಳೂರು : ಕರ್ನಾಟಕದಾದ್ಯಂತ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರದಲ್ಲಿ 40 ಕಡೆಗಳಲ್ಲಿ ರೇಡ್ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್​ ನೀಡಲಾಗಿದೆ. ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಉಮಾಕಾಂತ ಹಳ್ಳೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಕಚೇರಿ ಮೇಲೂ ದಾಳಿ ಮಾಡಲಾಗಿದೆ. ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಎಂಡಿ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಇನ್ನು ವಿಜಯಪುರ ‌ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್​​ಪಿ ಟಿ. ಮಲ್ಲೇಶ್​ ಹಾಗೂ‌ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಸೊಲ್ಲಾಪುರ ನಗರದ ಕೆಹೆಚ್​​ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್​​ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ಎಸ್​ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ‌ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ ಮಾಡಿದೆ.
ದ.ಕನ್ನಡ ಲೋಕಾಯುಕ್ತ ಎಸ್​ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಂಗಳೂರಿನ ಬಿ.ಜೈ.ನಲ್ಲಿರುವ ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
 

No Reviews