News / Blog Details

  • Home
  • >
  • News / Blog Details

ಬೆಂಗಳೂರಿನಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ 

  • 9
img ಬೆಂಗಳೂರಿನಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ 
Font size:
Print

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್​​ನಲ್ಲಿ ನಡೆದಿದೆ. ಕರವೇ ಕಾರ್ಯಕರ್ತೆ ಮಂಗಳಮುಖಿ ತನುಶ್ರೀ (40) ಮೃತ ದುರ್ದೈವಿ. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ  ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ತನುಶ್ರೀಯ ಪತಿ ಜಗನ್ನಾಥ್ ಮತ್ತು ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ತನುಶ್ರೀ ಅವರು ಸಂಗಮ ಎಂಬ ಹೆಸರಿನ ಎನ್​ಜಿಒ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
 

No Reviews