News / Blog Details

  • Home
  • >
  • News / Blog Details

ಆಪರೇಷನ್ ಸಿಂಧೂರ ಕಾರ್ಯಾಚರಣೆ ದೇಶಕ್ಕೆ ಸಂತೋಷ ತಂದಿದೆ- ನಿಖಿಲ್‌ 

  • 56
img ಆಪರೇಷನ್ ಸಿಂಧೂರ ಕಾರ್ಯಾಚರಣೆ ದೇಶಕ್ಕೆ ಸಂತೋಷ ತಂದಿದೆ- ನಿಖಿಲ್‌ 
Font size:
Print

ರಾಮನಗರ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂಧೂರ ಕೈಗೊಂಡಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಮೆಚ್ಚಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಭಾರತೀಯ ಕುಟುಂಬಗಳು ಅಂದು ಯಾವ ಪರಿಸ್ಥಿತಿ ಎದುರಿಸಿದ್ದರು ಎಂದು ಎಲ್ಲರಿಗೂ ನೋವಿತ್ತು. ಪಹಲ್ಗಾಮ್ ದುರ್ಘಟನೆಯಲ್ಲಿ ಹೆಣ್ಣುಮಕ್ಕಳು ಕುಂಕುಮವನ್ನು ಕಳೆದುಕೊಂಡಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರರ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಸಿಂಧೂ ನದಿಯ ಬಗ್ಗೆ ಕೂಡ ಪ್ರಧಾನ ಮಂತ್ರಿಗಳು ಚರ್ಚೆ ಮಾಡಿದ್ದಾರೆ. ಭಾರತದ ಮೂಲಕ ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿದು ಹೋಗುತ್ತದೆ. ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿಯುವುದನ್ನು ಕೂಡ ತಪ್ಪಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ. ಇದು ಸ್ವಾಗತಾರ್ಹ ಎಂದು ತಿಳಿಸಿದರು. 
 

No Reviews