ಕಲಬುರಗಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರಕಾರ ತಕ್ಕ ಪ್ರತ್ಯುತ್ತರ ನೀಡಿದ್ದು, ಈ ವಿಚಾರ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನಾವು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಶುಕ್ರವಾರ ನಾವು ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ, ಕೇಂದ್ರ ಸರ್ಕಾರ ಉತ್ತಮ ನಿಧಾರ ಕೈಗೊಂಡಿದೆ. ಪ್ರಧಾನಮಂತ್ರಿ ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ. ಪಾಕಿಸ್ತಾನ ಒಂದು ಖಾಲಿ ಡಬ್ಬಾ ಇದ್ದಂತೆ. ಪಾಕಿಸ್ತಾನ ಒಂದು ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನು ಮಾಡಲು ಸಹ ಸಿದ್ಧ ಎಂದು ಹೇಳಿದರು.
ಪಾಕಿಸ್ತಾನವನ್ನು ಎರಡೇ ದಿನಕ್ಕೆ ನಿರ್ನಾಮ ಮಾಡಬಹುದು-ಜಮೀರ್
2025-05-10 16:53:21- 46