ಇಂದು ಪವಿತ್ರಾ ಗೌಡ ಅವರು ಬೆಂಗಳೂರಿನ ಶಕ್ತಿಯುತ ದೇವಾಲಯವಾದ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.. ಇತ್ತೀಚೆಗಷ್ಟೆ ನಿಮಿಷಾಂಭ ದೇವಾಲಯಕ್ಕೆ ಪವಿತ್ರಾ ಗೌಡ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ಈಗ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ಬನಶಂಕರಿಗೆ ಮಡಿಲಕ್ಕಿ ತುಂಬಿದ್ದಾರೆ. ಪವಿತ್ರಾ ಗೌಡ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಆರು ತಿಂಗಳು ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರ ಬಂದಾಗಿನಿಂದಲೂ ಹಲವು ದೇವಾಲಯಗಳಿಗೆ ಪವಿತ್ರಾ ಗೌಡ ಭೇಟಿ ನೀಡುತ್ತಲೇ ಇದ್ದಾರೆ. ಜಾಮೀನಿನ ಹೊರಬಂದ ಬಳಿಕ ಕೆಲ ದಿನಗಳಲ್ಲೇ ದೆಹಲಿಗೆ ತೆರಳಿದ್ದ ಪವಿತ್ರಾ ಅಲ್ಲಿಯೂ ಕೆಲ ದೇವಾಲಯಗಳಿಗೆ ಭೇಟಿ ನೀಡಿದ್ದರು. ಕುಂಭ ಮೇಳಕ್ಕೂ ಹೋಗಿ ಬಂದರು. ಕೆಲ ದಿನಗಳ ಹಿಂದೆ ನಿಮಿಷಾಂಭ ದೇವಾಲಯಕ್ಕೂ ಹೋಗಿ ಬಂದರು.
ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪವಿತ್ರಾ ಗೌಡ
2025-04-15 18:06:46- 12