News / Blog Details

  • Home
  • >
  • News / Blog Details

ಅವೈಜ್ಞಾನಿಕ ಜಾತಿಗಣತಿ ವರದಿಗೆ ಸಂಪೂರ್ಣ ವಿರೋಧವಿದೆ- ರೇಣುಕಾಚಾರ್ಯ

  • 9
img ಅವೈಜ್ಞಾನಿಕ ಜಾತಿಗಣತಿ ವರದಿಗೆ ಸಂಪೂರ್ಣ ವಿರೋಧವಿದೆ- ರೇಣುಕಾಚಾರ್ಯ
Font size:
Print

ದಾವಣಗೆರೆ: ಅವೈಜ್ಞಾನಿಕ ಜಾತಿ ಜನಗಣತಿ ವರದಿಗೆ ನಮ್ಮ ಸಂಪೂರ್ಣ ವಿರೋಧವಿದೆ. ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ. ಆದರೂ, ಜಾತಿ ಜನಗಣತಿ ವರದಿ ಬಿಡುಗಡೆಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅಧಿಕಾರ ಹಂಚಿಕೆ ಭಯದಿಂದ ಜಾತಿ ಜನಗಣತಿ ಬ್ರಹ್ಮಾಸ್ತ್ರವನ್ನು ಬಿಡುತ್ತಿದ್ದಾರೆ. ಎಂದು ದೂರಿದರು. ಜಾತಿ ಜನಗಣತಿ ವರದಿಯನ್ನು ನಾವು ವಿರೋಸುತ್ತೇವೆ. ಜಾತಿ ಜನಗಣತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಜಾತಿ, ಸಮುದಾಯಗಳ ಅವೈಜ್ಞಾನಿಕ ಮಾಹಿತಿ ಇದೆ. ನೂರಾರು ಕೋಟಿ ಖರ್ಚು ಮಾಡಿ, ಅವೈಜ್ಞಾನಿಕ ಜಾತಿ ಜನಗಣತಿ ವರದಿ ಮಾಡಲಾಗಿದೆ ಎಂದರು. ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿದಂತೆ ಎಲ್ಲ ಜಾತಿಗಳ ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ರಾಜ್ಯದ ಜನತೆ ದಂಗೆ ಏಳುತ್ತಾರೆ, ಜಾತಿ ಜನಗಣತಿ ವರದಿ ಅನುಷ್ಟಾನಕ್ಕೆ ತಂದರೆ ಬೆಂಕಿ ಹೊತ್ತಿ ಉರಿಯುತ್ತದೆ. 10ವರ್ಷದ ಹಿಂದೆಯೆ ಯಾಕೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
 

No Reviews