News / Blog Details

  • Home
  • >
  • News / Blog Details

ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ-  ಕಾರಜೋಳ

  • 48
img ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ-  ಕಾರಜೋಳ
Font size:
Print

ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ..  ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ. ಈಗ ನಾಗಮೋಹನ್ ದಾಸ್ ಅವರಿಂದ ಗಣತಿ ಮಾಡಿಸೋದಾಗಿ ಹೇಳುತ್ತಿದೆ. ಸರ್ಕಾರದ ಬಳಿಕ ಕಾಂತರಾಜು ವರದಿ ಅಂಕಿಅಂಶಗಳು ಇವೆ. ಅದರ ಆಧಾರದಲ್ಲಿ ಒಳಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿದರು. ಇಲ್ಲದೆ ಹೋದರೆ ನಾಗಮೋಹನ್ ದಾಸ್ ಆಯೋಗ ಮೇ 5ರಿಂದ ಒಳಮೀಸಲಾತಿ ಗಣತಿ ಪ್ರಾರಂಭ ಮಾಡುತ್ತಿದೆ. ಇದಕ್ಕೂ ಮೊದಲೇ ಸಿದ್ದರಾಮಯ್ಯ ಜೂನ್10ರ ಒಳಗೆ ಮೀಸಲಾತಿ ಕೊಡುತ್ತೇವೆ ಎಂಬ ಭರವಸೆ ಕೊಟ್ಟು ಗಣತಿ ಶುರು ಮಾಡಿಸಬೇಕು ಎಂದರು. ಸಚಿವ ಮಹದೇವಪ್ಪ ಬೆಳಗಾವಿ ಅಧಿವೇಶನ ಸಮಯದಲ್ಲಿ ಪ್ರತಿಭಟನೆ ಜಾಗದಲ್ಲಿ ಬಂದು 3 ತಿಂಗಳ ಒಳಗೆ ಒಳಮೀಸಲಾತಿ ಕೊಡಿಸುತ್ತೇವೆ. ಇಲ್ಲದೇ ಹೋದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಮೊದಲು ಒಳಮೀಸಲಾತಿ ಕೊಡಿಸಲಿ. ಜೊತೆಗೆ ಸಮುದಾಯದ 6 ಮಂತ್ರಿಗಳು ಒಳಮೀಸಲಾತಿ ಕೊಡಿಸಬೇಕು. ಸಿಎಂ ಮೀಸಲಾತಿ ಕೊಡಿಸದೇ ಹೋದರೆ ನೀವು ಈ ಸಮಾಜಕ್ಕೆ ದ್ರೋಹ ಮಾಡಿದ ಹಾಗೆ ಆಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. 
 

No Reviews