ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್ಪೆಕ್ಟರ್ ನಾಗರಾಜು ಮೃತ ದುರ್ದೈವಿ. ಬಸ್ನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಸ್ಥಳದಲ್ಲೇ ಸಬ್ ಇನ್ಸ್ಪೆಕ್ಟರ್ ಸಾವು
2025-05-19 13:47:47- 57