ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಹಾಸ್ ಹತ್ಯೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಹತ್ಯೆ ವೈಯುಕ್ತಿಕವಾಗಿ ಆದ ಗಲಾಟೆ. ಜಾತಿ, ಜಾತಿಯ ನಡುವೆ ಅಥವಾ ಧರ್ಮದ ನಡುವೆ ಆದ ಗಲಾಟೆ ಅಲ್ಲ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಮ್ಮ ಜಿಲ್ಲೆಯನ್ನು ನಾವು ಮುಂದೆ ತೆಗೆದುಕೊಂಡು ಹೋಗಲು ಎಲ್ಲರೂ ಸಹಕಾರ ನೀಡಬೇಕು. ಯಾವುದೇ ಸಮಾಜ, ಧರ್ಮ ನಮ್ಮ ಮಂಗಳೂರನ್ನು ಹಿಂದೆ ಕೊಂಡೊಯ್ಯಬಾರದು. ಈ ರೀತಿ ಕೃತ್ಯಗಳು ಬಹಿರಂಗ ಆದಾಗ ದ್ವೇಷ ಭಾವೆನ ಬರುವುದು ಸ್ವಾಭಾವಿಕ. ಇದನ್ನು ನಿಭಾಯಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು ಎಂದರು. ಫಾಜಿಲ್ ಹತ್ಯೆಗೆ ಪ್ರತೀಕಾರ ಎಂಬ ಭಾವನೆ ಜನರಿಗೆ ಇತ್ತು. ಫಾಜಿಲ್ ತಂದೆಯೇ ಫೋನ್ ಮಾಡಿ ಇಂಥ ಪ್ರತೀಕಾರ ನಮ್ಮದಲ್ಲ ಎಂದು ಹೇಳಿದ್ದಾರೆ. ಫಾಜಿಲ್ ಕುಟುಂಬಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ ನಾವು ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇವೆ ಎಂದು ಹೇಳಿದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ; ದುಷ್ಕರ್ಮಿಗಳ ಪತ್ತೆಗೆ ಖಾದರ್ ಆಗ್ರಹ
2025-05-02 16:39:11- 54